ಬೆಂಗಳೂರು(ಅ.26): ಮನೆ ಹೊರ ಆವರಣದಲ್ಲಿ ಬಕೆಟ್ನಲ್ಲಿ ಮಣ್ಣು ತುಂಬಿ ಪೂಜೆ ಸಲುವಾಗಿ ಗಾಂಜಾ ಗಿಡವನ್ನು ಬೆಳೆಸಿದ ತಪ್ಪಿಗೆ ಈಗ ಪೇಯಿಂಟರ್ ವೊಬ್ಬ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾನೆ.
ಬೈರತಿ ನಿವಾಸಿ ರಾಮ್ ಆಶೀಶ್ ಬಂಧಿತನಾಗಿದ್ದು, ಆರೋಪಿಯಿಂದ 6 ಅಡಿ ಎತ್ತರದ ಗಾಂಜಾ ಗಿಡ ಜಪ್ತಿ ಮಾಡಲಾಗಿದೆ. ಕಾನೂನು ಬಾಹಿರವಾಗಿ ಮನೆಯಲ್ಲಿ ರಾಮ್ ಗಾಂಜಾ ಗಿಡವನ್ನು ಬೆಳೆಸಿರುವ ಮಾಹಿತಿ ಅನ್ವಯ ಆತನ ಮನೆಗೆ ತೆರಳಿ ಪರಿಶೀಲಿಸಿದಾಗ ಹೊರಾವರಣದಲ್ಲಿ ಗಾಂಜಾ ಗಿಡ ಪತ್ತೆಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಪೂಜೆ ಮಾಡಲು ಪಾಟ್ನಲ್ಲಿ ಗಾಂಜಾ ಗಿಡ ಬೆಳೆಸಿದ್ದ ಪೇಯಿಂಟರ್ ಜೈಲಿಗೆ..!











Leave a Reply