ಕೋಟ: ಅಂತಾರಾಷ್ಟಿçಯ ಸಾಕ್ಷರತಾ ದಿನಾಚರಣೆ ಪ್ರಯುಕ್ತ ಶಾಲಾಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಶಿಕ್ಷಣ ತರಬೇತಿ ಸಂಸ್ಥೆ (ಡಯಟ್ ) ಉಡುಪಿ ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ಇವರು ಆಯೋಜಿಸಿದ ಸಾಕ್ಷರತಾ ಮಹತ್ವ ಮತ್ತು ನನ್ನ ಜೀವನದಲ್ಲಿ ಗಾಂಧಿ ತತ್ವ ಅಳವಡಿಸಿಕೊಳ್ಳುವ ಕುರಿತು ನಡೆದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕೋಟ ಮಣೂರು ಸರಕಾರಿ ಸಂಯುಕ್ತ ಪ್ರೌಢಶಾಲೆ ವಿದ್ಯಾರ್ಥಿ ಕುಮಾರಿ, ಮೈತ್ರಿ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಮುಖ್ಯೋಪಾಧ್ಯಾಯರು ಮತ್ತು ಅಧ್ಯಾಪಕ ವೃಂದ, ಅಧ್ಯಕ್ಷರು ಮತ್ತು ಸದಸ್ಯರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ











Leave a Reply