ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಅಶಕ್ತರಿಗೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವೈದಕೀಯ ನೆರವು

ಕೋಟ: ಇಲ್ಲಿ ಕುಂಭಾಶಿಯ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ 2025-2026 ನೇ ಸಾಲಿನ ದೈಹಿಕವಾಗಿ ಅಶಕ್ತರಾಗಿರುವ 54 ಫಲಾನುಭವಿಗಳಿಗೆ ಸುಮಾರು ರೂ.ಐದೂವರೆ ಲಕ್ಷ ಮೊತ್ತದ ವೈದ್ಯಕೀಯ ನೆರವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿಗಳಾದ ಕೆ ಶ್ರೀರಮಣ ಉಪಾಧ್ಯಾಯರು ಮಾತನಾಡಿ, ಕಳೆದ ಮೂರು ದಚಕಗಳಿಂದಲೂ ಶ್ರೀದೇವಳವು ಸಮಾಜಮುಖಿಯಾಗಿ ತೆರೆದುಕೊಂಡಿದ್ದು ಪ್ರತಿ ವರ್ಷವೂ ದೈಹಿಕ ಆಶಕ್ತರಿಗೆ, ದೇವಸ್ಥಾನದ ಜೀರ್ಣೋದ್ಧಾರ ಹಾಗೂ ವಿವಿಧ ಶಾಲೆಗಳು, ಸಂಘ ಸಂಸ್ಥೆಗಳಿಗೆ ಯತಾಶಕ್ತಿ ಅನುದಾನವನ್ನು ಪ್ರಸಾದ ರೂಪವಾಗಿ ನೀಡುತ್ತಾ ಬಂದಿರುತ್ತದೆ.ಪ್ರಸಾದ ರೂಪವಾಗಿ
ವೈದ್ಯಕೀಯ ನೆರವನ್ನು ಪಡೆದ ಅಶಕ್ತ ಫಲಾನುಭವಿಗಳು ಶ್ರೀ ವಿನಾಯಕನ ಅನುಗ್ರಹದಿಂದ ಶೀಘ್ರವಾಗಿ ಚೇತರಿಸಿಕೊಂಡು ಎಲ್ಲರಿಗೂ ಆಯುರಾರೋಗ್ಯ ಆನಂದ ಐಶ್ವರ್ಯವನ್ನು ಕೊಟ್ಟು ಇಷ್ಟಾರ್ಥವನ್ನು ಅನುಗ್ರಹಿಸಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ನಿವೃತ್ತ ಆಡಳಿತ ಧರ್ಮದರ್ಶಿಗಳಾದ ಕೆ. ಸೂರ್ಯನಾರಾಯಣ ಉಪಾಧ್ಯಾಯ ಪರ್ಯಾಯ ಅರ್ಚಕರಾದ ಕೆ. ವ್ಯಾಸ ಉಪಾಧ್ಯಾಯ ಹಾಗೂ ಸಹೋದರರು ಕಚೇರಿಯ ಮ್ಯಾನೇಜರ್ ನಟೇಶ್ ಕಾರಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಶಕ್ತರಿಗೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವೈದಕೀಯ ನೆರವು ಆಡಳಿತ ಧರ್ಮದರ್ಶಿಗಳಾದ ಕೆ ಶ್ರೀರಮಣ ಉಪಾಧ್ಯಾಯರು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ನಿವೃತ್ತ ಆಡಳಿತ ಧರ್ಮದರ್ಶಿಗಳಾದ ಕೆ. ಸೂರ್ಯನಾರಾಯಣ ಉಪಾಧ್ಯಾಯ ಪರ್ಯಾಯ ಅರ್ಚಕರಾದ ಕೆ. ವ್ಯಾಸ ಉಪಾಧ್ಯಾಯ ಇದ್ದರು.

Leave a Reply

Your email address will not be published. Required fields are marked *