ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಂಸ್ಥೆಗಳ ವಿವಿಧ ಪ್ರಕಾರಗಳ ಕಲಾ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವ ಕಾಳಜಿ ದೊಡ್ಡದು: ಆಂಡ್ರ್ಯಾ ಡಿ. ಸಿಲ್ವ

ಕೋಟ: 25 ವರ್ಷಗಳ ಕಾಲ ಯಶಸ್ವೀ ಕಲಾವೃಂದವನ್ನು ಮುನ್ನಡೆಸುವಲ್ಲಿ ಅತ್ಯುನ್ನತ ಸಹಕಾರ ನೀಡುತ್ತಾ ತಮ್ಮ ಕೇಂದ್ರದ ಮಕ್ಕಳಿಗೆ ಒಂದು ಅವಕಾಶವಾಗಲಿ ಎಂಬ ಕಾಳಜಿಯಿಂದ ಸಂಸ್ಥೆಗಳ ವಿವಿಧ ಪ್ರಕಾರಗಳ ಪ್ರದರ್ಶನಕ್ಕೆ ಅವಕಾಶ ಮಾಡುವ ಮನಸ್ಸು ಹೆರಿಯ ಮಾಸ್ಟರ್‌ರವರದ್ದು.

ತನ್ನ ದುಡಿಮೆಯ ಒಂದು ಪಾಲನ್ನು ಇಂತಹ ಕಾರ್ಯಕ್ರಮಗಳಿಗೆ ವಿನಿಯೋಗಿಸಿ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ ಎಂದು ಕಲಾ ಪೋಷಕ ಆಂಡ್ರ್ಯಾ ಡಿಸಿಲ್ವಾ ಹೆರಿಯ ಮಾಸ್ಟರ್‌ರವರನ್ನು ಗೌರವಿಸಿ ಮಾತನ್ನಾಡಿದರು. ತೆಕ್ಕಟ್ಟೆ ದೇವಾಡಿಗರ ಬೆಟ್ಟುವಿನಲ್ಲಿ ಇತ್ತೀಚಿಗೆ ಆಯೋಜಿಸಿದ ಯಶಸ್ವೀ ಕಲಾವೃಂದದ ಕಾರ್ಯಕ್ರಮದಲ್ಲಿ ಹೆರಿಯ ಮಾಸ್ಟರ್ ಹಾಗೂ ಗುಲಾಬಿಯವರನ್ನು ಗೌರವಿಸಿ ಆಂಡ್ರ್ಯಾ ಡಿಸಿಲ್ವಾ ಮಾತನ್ನಾಡಿದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗಣಪತಿ ಟಿ. ಶ್ರೀಯಾನ್ ಮಾತನ್ನಾಡಿ, ಕಲೆಯು ನಿಂತ ನೀರಲ್ಲ. ಮಕ್ಕಳಿಗೆ ಕಲೆಯನ್ನು ಕಲಿಸಿ ಮುಂದಿನ ಜನಾಂಗಕ್ಕೆ ಕೈ ದಾಟಿಸುವ ಕೆಲಸ ಶ್ಲಾಘನೀಯ ಎಂದರು. ಗುರು ದೇವದಾಸ್ ರಾವ್ ಕೂಡ್ಲಿ, ಶ್ರೀನಿವಾಸ ಮಾಸ್ಟರ್, ಉದ್ಯಮಿ ಗೋಪಾಲ ಪೂಜಾರಿ, ಕಾರ್ಯದರ್ಶಿ ವೆಂಕಟೇಶ ವೈದ್ಯ, ಕು| ಪ್ರಣಮ್ಯ, ಮಾ| ಮನೀಶ್ ಉಪಸ್ಥಿತರಿದ್ದರು. ಬಳಿಕ ಸಂಗೀತ ಸಂಜೆ, ಯಕ್ಷ ಗಾನ ವೈಭವ, ಯಕ್ಷಗಾನ ಸುಧನ್ವಾರ್ಜುನ ರಂಗ ಪ್ರಸ್ತುತಿಗೊoಡಿತು.

ತೆಕ್ಕಟ್ಟೆ ದೇವಾಡಿಗರ ಬೆಟ್ಟುವಿನಲ್ಲಿ ಇತ್ತೀಚಿಗೆ ಆಯೋಜಿಸಿದ ಯಶಸ್ವೀ ಕಲಾವೃಂದದ ಕಾರ್ಯಕ್ರಮದಲ್ಲಿ ಹೆರಿಯ ಮಾಸ್ಟರ್ ಹಾಗೂ ಗುಲಾಬಿಯವರನ್ನು ಗೌರವಿಸಲಾಯಿತು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗಣಪತಿ ಟಿ. ಶ್ರೀಯಾನ್, ಗುರು ದೇವದಾಸ್ ರಾವ್ ಕೂಡ್ಲಿ, ಶ್ರೀನಿವಾಸ ಮಾಸ್ಟರ್, ಉದ್ಯಮಿ ಗೋಪಾಲ ಪೂಜಾರಿ ಇದ್ದರು.

Leave a Reply

Your email address will not be published. Required fields are marked *