ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ: ಬೇಳೂರು ಹಿರೇಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಿ.ಕಾಂ ವಿದ್ಯಾರ್ಥಿಯ ಶವ ಪತ್ತೆ – ಈಶ್ವರ್ ಮಲ್ಪೆ ತಂಡದಿಂದ ಯಶಸ್ವಿ ಕಾರ್ಯಾಚರಣೆ

ಕೋಟ: ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆರ್ಬೆಟ್ಟು ಸುಳಿಗುಂಡಿ ಹಿರೇಹೊಳೆಗೆ ಈಜಲು ತೆರಳಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಯ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ. ಸಾಹೇಬರಕಟ್ಟೆ ಗರಿಕೆಮಠ ಮೂಲದ ಸಾಮರಾಜ್ (೨೧) ಮೃತಪಟ್ಟ ದುರ್ದೇವಿ – ಯಾಗಿದ್ದಾನೆ. ಘಟನೆಯ ವಿವರ:ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಸಾಮರಾಜ್, ಜೂನ್ ೧೩ರ ಶನಿವಾರ ಸಂಜೆ ಆರ್ಬೆಟ್ಟು ಸುಳಿಗುಂಡಿ ಹಿರೇಹೊಳೆಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿ ಅವರು ಮುಳುಗಿ ನಾಪತ್ತೆಯಾಗಿದ್ದರು.

ಈಶ್ವರ್ ಮಲ್ಪೆ ತಂಡದಿoದ ಸಾಹಸಿಕ ಶೋಧ ಕಾರ್ಯ:ವಿದ್ಯಾರ್ಥಿ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆ ಹಾಗೂ ಅವರ ತಂಡ ತಕ್ಷಣವೇ ಶೋಧ ಕಾರ್ಯಾಚರಣೆಗೆ ಇಳಿಯಿತು. ಭಾನುವಾರ ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯುತ್ತಿದ್ದರೂ ಲೆಕ್ಕಿಸದ ತಂಡ, ಆಕ್ಸಿಜನ್ ಸಿಲಿಂಡರ್ ಬಳಸಿ ಹೊಳೆಯ ಆಳಕ್ಕೆ ಇಳಿದು ತೀವ್ರ ಹುಡುಕಾಟ ಮುಂದುವರಿಸಿತು.

ಕಾರ್ಯಾಚರಣೆಯ ಫಲವಾಗಿ ರವಿವಾರ ಮುಂಜಾನೆ ಹೊಳೆಯ ಮಧ್ಯಭಾಗದಲ್ಲಿ ಸಾಮರಾಜ್ ಅವರ ಮೃತದೇಹ ಪತ್ತೆಯಾಗಿದೆ. ಹುಡುಕಾಟ ನಡೆಸಿದ ನದಿಯ ಅಲ್ಪ ದೂರದಲ್ಲೇ ಶವ ಸಿಕ್ಕಿರುವುದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *