ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರಿಂದ ಸಮವಸ್ತ್ರ ವಿತರಣೆ

ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 8,9 ಮತ್ತು 10ನೇ ತರಗತಿಯ 81 ವಿದ್ಯಾರ್ಥಿಗಳಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರ ಆಯೋಗದಲ್ಲಿ ಭೀಮ ಜ್ಯುವೆಲ್ಲರ್ಸ್ ಉಡುಪಿ ಇವರಿಂದ ಶಾಲಾ ಸಮವಸ್ತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ನ ಉನ್ನತ ಅಧಿಕಾರಿಯಾದ ಗುರುಪ್ರಸಾದ್ ಸರ್ ಮತ್ತು ಭೀಮ ಜ್ಯುವೆಲರ್ಸ್ ನ ಅಧಿಕಾರಿಯಾದ ಪೆರಂಪಳ್ಳಿ ರಾಘವೇಂದ್ರ ಭಟ್ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಶ್ರೀಮತಿ ಪುಷ್ಪಲತಾ ಕೃಷ್ಣನ್ ಕುಟುಂಬದವರನ್ನು ಸ್ಮರಿಸುತ್ತಾ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ನ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ಬಂದಂತಹ ಅತಿಥಿಗಳಿಗೆ ಧನ್ಯವಾದ ಸಮರ್ಪಿಸಿದರು. ಸಹ ಶಿಕ್ಷಕ ಅಶೋಕ್ ಹೆಗಡೆ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *